ರಾಮನನ್ನು ರಾಮಾಯಣವನ್ನು ಹಳಿಯುವವರಿಗೆ ಯಾವ ಬಗೆಯಿಂದ ಗೂಡಾರ್ಥಗಳನ್ನ ವಿಶ್ಲೇಷಿಸಿ ಹೇಳಿದರೂ ಸಮಾಧಾನವಾಗದು. ಅಂಥವರು ತಮ್ಮ ಕೆಲವು ವಾದಗಳಲ್ಲಿ ‘ಹಾಗೆ ನಡೆದಿದ್ದು’ ಹೌದೆಂದೂ, ಎಂಥಾ ಅನ್ಯಾಯವೆಂದೂ ಬೊಬ್ಬಿಟ್ಟರೆ, ಕೆಲವೆದೆ, ಇಡಿಯ ಕಾವ್ಯವೇ ಕಟ್ಟು ಕಥೆ ಅಂದು ಮೂಗು ಮುರಿಯುತ್ತಾರೆ. ಆದರೆ ಮಹಾಕಾವ್ಯಗಳನ್ನು ಮೇಲಮೇಲಕ್ಕೆ ಓದಿ, ಅವುಗಳ ಬಗ್ಗೆ ಗೌರವವಿದ್ದೂ ಅರ್ಥೈಸಿಕೊಳ್ಳಲಾಗದೆ ಅನುಮಾನದ ಹುತ್ತ ಕಟ್ಟಿಕೊಂಡು ಒದ್ದಾಡುವ ಸಂಸ್ಕಾರವಂತರೂ ಇರುತ್ತಾರೆ. ಇಂಥವರು ರಾಮನಾಗಲೀ ಕೃಷ್ಣನಾಗಲೀ ಮಾಡಿದ್ದನ್ನು ಅನ್ಯಾಯವೆಂದು ಹೇಳಲಾರರು; ಪ್ರತಿವಾದಿಗಳಿಗೆ ಸಮರ್ಥ ಉತ್ತರ ನೀಡಿ ಸುಮ್ಮ್ಜನಿರಿಸಲೂ ಆರರು. ನಾನು ಈ [...]